ವಿಕಲಚೇತನರಿಗೆ ತ್ರಿಚಕ್ರ ವಾಹನ, ಶ್ರವಣ ಸಾಧನ ಹಾಗೂ ವೀಲ್‌ಚೇರ್ ವಿತರಿಸಿದ ಶಾಸಕ ಭೀಮಣ್ಣ ನಾಯ್ಕ

0
WhatsApp Image 2026-08-05 at 20.13.58

ಶಿರಸಿ: ವಿಕಲಚೇತನರ ಸಬಲೀಕರಣ ಹಾಗೂ ಅವರ ಸ್ವಾವಲಂಬಿ ಜೀವನಕ್ಕೆ ಸರ್ಕಾರ ಸಂಪೂರ್ಣ ಬೆಂಬಲವಾಗಿ ನಿಲ್ಲಲಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕರಾದ ಭೀಮಣ್ಣ ನಾಯ್ಕ ಅವರು ಹೇಳಿದರು.

ಅವರು ಇಂದು ನಗರದ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ತಾಲೂಕು ಪಂಚಾಯತ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಮಂಜೂರಾದ ತ್ರಿಚಕ್ರ ವಾಹನ, ಶ್ರವಣ ಸಾಧನ (ಕಿವಿ ಯಂತ್ರ) ಹಾಗೂ ಯಂತ್ರ ಚಾಲಿತ ವೀಲ್‌ಚೇರ್‌ಗಳನ್ನು (Wheelchair) ಹಸ್ತಾಂತರಿಸಿ ಮಾತನಾಡಿದರು.

ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅವರ ದಿನನಿತ್ಯದ ಸಂಚಾರಕ್ಕೆ ಹಾಗೂ ಸ್ವಾವಲಂಬಿ ಬದುಕಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಉಚಿತವಾಗಿ ಈ ಸಾಧನ-ಸಲಕರಣೆಗಳನ್ನು ನೀಡುತ್ತಿದೆ. ಅರ್ಹರಿದ್ದ ಪ್ರತಿಯೊಬ್ಬರಿಗೂ ಸರ್ಕಾರದ ಸೌಲಭ್ಯಗಳು ತಲುಪುವಂತೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಅವರು ಈ ಸಂದರ್ಭದಲ್ಲಿ ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗಳು, ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *